Wednesday 28 May 2014

ಗಿಳಿ ಬಾಗಿಲು(ಹವ್ಯಕ ಬ್ಲಾಗ್ )- ಉಪ್ಪಿದ್ದ ಉಪ್ಪಿನ ಕಲ್ಲಿದ್ದ ?ಹೇಳಿ ಕೇಳಿದ್ದಿಲ್ಲೆ

ಇಂದು  ಕೊದಿಲಿಂಗೆ ರಜ್ಜ ಉಪ್ಪು ಕಮ್ಮಿ ಆಗಿತ್ತು .ಮಗ ಉಂಬಗ ಉಪ್ಪಿದ್ದ ಹೇಳಿ ಕೇಳಿದ .ಅಷ್ಟಪ್ಪಗ ಅವನ ಬಾಯಿಗೆ ಕೋಲು ಹಾಕುಲೆ ಆನು ಸುಮ್ಮನೆ ಉಪ್ಪು ತಂದು ಬಳುಸದ್ದೆ :ಮನೇಲಿ ಉಪ್ಪು ಇರದ್ದೆ ಒಳಿತ್ತ ಮಾರಾಯ ?ಹೇಳಿ ಕೇಳಿದೆ .ಅವಂದೆ ಬಿಡದ್ದೆ "ಅಪ್ಪು ಉಪ್ಪೇ ಇರಕ್ಕು ಹೇಳಿ ಎಂತ ?ಉಪ್ಪಿನ ಕಲ್ಲುದೆ ಇರ್ತಿಲ್ಲೆಯ" ಹೇಳಿ ಕೇಳಿದ .ಅಷ್ಟಪ್ಪಗ ಉಪ್ಪುದೆ ಉಪ್ಪಿನ ಕಲ್ಲುದೆ ಬೇರೆಯ ಹೇಳಿ ಚರ್ಚೆ ಬಂತು .ಅಷ್ಟಪ್ಪಗ ಎನಗೆ "ಉಪ್ಪಿದ್ದ ಉಪ್ಪಿನ ಕಲ್ಲಿದ್ದ ಹೇಳಿ ಕೇಳಿದ್ದಿಲ್ಲೆ " ಹೇಳುವ ಒಂದು ಆಡು ಮಾತು ನೆಂಪು ಆತು .
ಅನು ಸಣ್ಣಾದಿಪ್ಪಗ ಈ ನುಡಿಗಟ್ಟಿನ ಕೇಳಿದ್ದೆ.ಆದರೆ ಅದರ ಅರ್ಥ ಎಂತ ಹೇಳಿ ಎನಗೆ ಗೊಂತಿತ್ತಿಲ್ಲೆ.
.ಮನುಷ್ಯ ಸಮಾಜ ಜೀವಿ .ತನ್ನ ಸುತ್ತ ಮುತ್ತಲಿನ ಜನರತ್ತರೆ ನೆಂಟ್ರು ಗಳ ಅಮ್ಬಗಂಬಗ ಕಾಣಕ್ಕಾವುತ್ತು.ಅವರ ಮನೆಗೆ ಹೊಯಕ್ಕಾವುತ್ತು .ಎಲ್ಲೋರು ಒಂದೇ ರೀತಿ ಇರ್ತವಿಲ್ಲೆ .ನಮಗೆ ಕೆಲವು ಜನಂಗಳ ಹತ್ರೆ ಹೆಚ್ಚು ಆತ್ಮೀಯತೆ ಇರುತ್ತು .ಕೆಲವು ಜನಂಗಳ ಹತ್ತರೆ ಅಷ್ಟಕ್ಕಷ್ಟೇ ಇರುತ್ತು .
ನಮಗೆ ಹೆಚ್ಚ್ಚು ಆತ್ಮೀಯರಾಗಿಪ್ಪೋರ ಮನೆಗೆ ಹೋದರೆ ಅಥವಾ ಅವರ ಎಲ್ಲಿಯಾದರೂ ಕಂಡರೆ ನಾವು ಅವರತ್ರೆ ಅವರ ಕೆಲಸ ಕಾರ್ಯ ದ ಬಗ್ಗೆ ಮಕ್ಕಳು ಮರಿಗಳ ಬಗ್ಗೆ ವಿಚಾರ್ಸುತ್ತು
ಆರಾದರೂ ನಮಗೆ ಅಷ್ಟು ಹಿತ ಇಲ್ಲದ್ದೋರ ಮನೆಗೆ ಹೋದರೆ  ಅವರ ಖಾಸಾ ವಿಷಯಲ್ಲಿ ಎಂತದುದೆ ಮಾತಾಡುತ್ತವಿಲ್ಲೆ .ಹೋದ ಕೆಲಸ ಎಂತದು ಅದರ ಮಾತ್ರ ಮುಗಿಸಿಕ್ಕಿ ಅವು ಕೊಟ್ಟ ಕಾಪಿಯ ಚಾಯವಾ ಕುಡುದಿಕ್ಕಿ ಬತ್ತು !
ಇಂಥ ಸಂದರ್ಭಲ್ಲಿ ಆನು ಅವರತ್ತರೆ" ಉಪ್ಪಿದ್ದ ಉಪ್ಪಿನ ಕಲ್ಲಿದ್ದ ?ಹೇಳಿ ಕೇಳಿದ್ದಿಲ್ಲೆ .ಎನ್ನಷ್ಟಕ್ಕೆ ಕೆಲಸ ಮುಗಿಸಿಕ್ಕಿ ಬೈಂದೆ" ಹೇಳಿ ಹೇಳುತ್ತವು .
ಅವರ ಒಳಗಿನ ವ್ಯವಹಾರ ನಮಗೆ ಇಷ್ಟ ಇಲ್ಲೇ ಅವರತ್ತರೆ ಎಷ್ಟು ಬೇಕೋ ಅಷ್ಟು ಇದ್ದರೆ ಸಾಕು ಹೇಳುವ ಅರ್ಥವ ಉಪ್ಪಿದ್ದ ಉಪ್ಪಿನ ಕಲ್ಲಿದ್ದ ?ಹೇಳಿ ಕೇಳಿದ್ದಿಲ್ಲೆ" ಹೇಳುವ ನುಡಿಗಟ್ಟು ತಿಳುಸುತ್ತು .
ಇದು ಕೋಳ್ಯೂರು ಸೀಮೆ ಕನ್ನಡಲ್ಲಿ ಕೂಡಾ ಉಪ್ಪುಂಟ ಉಪ್ಪಿನ ಕಲ್ಲುಂಟ ?ಹೇಳಿ ಬಳಕೆಲಿ ಇದ್ದು .ಈ ಪರಿಸರಲ್ಲಿ ಇದು ತುಳುವಿಲಿ ರಜ್ಜ ಬೇರೆ ರೀತಿಲಿ ಬಳಕೆ ಇದ್ದು .ತುಳುವಿಲಿ ನೀರುಂಡ ಅರ್ಕಂಜಿ ಉಂಡಾದ್ ಕೇನುದುಜ್ಜಿ ಹೇಳುವ ಮಾತುಪ್ರಚಲಿತ ಇದ್ದು .
ಬಹುಶ ಬೇರೆ ಕಡೆಲಿದೆ ನಮ್ಮ ಹವ್ಯಕ ಭಾಷೆಲಿ ಈ ರೀತಿಯ ನುಡಿಗಟ್ಟಿನ ಬಳಕೆ ಇಕ್ಕು ಹೇಳಿ ಎನ್ನ ಅಂದಾಜು .ಅಥವಾ ಇದಕ್ಕೆ ಸಮಾನಾಂತರವಾದ ಬೇರೆ ಮಾತುಗಳ ಬಳಕೆ ಇಪ್ಪಲೂ ಸಾಕು .ಈ ಬಗ್ಗೆ ಗೊಂತಿಪ್ಪೋರು ತಿಳುಸಿ ಆತಾ .

No comments:

Post a Comment